ಸರ್ಕಾರದ ವಿರುದ್ಧ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಡೆಸುವ ಹೋರಾಟದಲ್ಲಿ ನೀವು ಭಾಗಿಯಾಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ ರಮೇಶ್ ಜಾರಕಿಹೊಳಿ ತಾನು ಹಿಂದೆ ನೀಡಿದ ಹೇಳಿಕೆಗಳಿಗೆ ಈಗಲೂ ಬದ್ಧನಾಗಿದ್ದೇನೆ, ಪದೇಪದೆ ಹೇಳಿದ್ದನ್ನೇ ಹೇಳಿಸಿ ಮುಜುಗುರ ಉಂಟಾಗುವ ಸ್ಥಿತಿ ನಿರ್ಮಿಸಬೇಡಿ ಎಂದು ಹೇಳಿದರು. ಯತ್ನಾಳ್ ಉಚ್ಚಾಟನೆಯ ಬಳಿಕ ಜಾರಕಿಹೊಳಿ ಮೊದಲಿನಂತೆ ಮಾತಾಡುತ್ತಿಲ್ಲ.