ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್

ಕನ್ನಡದ ‘ಕೆಜಿಎಫ್ 2’ ಸಿನಿಮಾದಲ್ಲಿಯೂ ನಟಿಸಿರುವ ಬಾಲಿವುಡ್ ಸ್ಟಾರ್ ನಟ ಸಂಜಯ್ ದತ್ ನಿನ್ನೆಯಷ್ಟೆ ಮಂಗಳೂರಿಗೆ ಆಗಮಿಸಿದ್ದರು. ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಹುಲಿ ಕುಣಿತ ಊದು ಪೂಜೆಯಲ್ಲಿ ಭಾಗವಹಿಸಿದ ಸಂಜಯ್ ದತ್, ಹುಲಿ ಕುಣಿತ ನೋಡಿ ಖುಷಿ ಪಟ್ಟರು.