ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಬಿಲ್ ರಿಲೀಸ್ ಮಾಡಲು 40 ಪರ್ಸೆಂಟ್ ಕಮೀಶನ್ ಕೇಳಲಾಗುತ್ತದೆ ಎಂದು ಆರೋಪಿಸಿದ ಅಂಬಿಕಾಪತಿಯ ಫ್ಲ್ಯಾಟ್ ನಲ್ಲಿ ಹಣ ಸಿಕ್ಕಿರುವುದು ಹಲವಾರು ಊಹಾಪೋಹಗಳಿಗೆ ಕಾರಣವಾಗಿದೆ. ವಿಧಾನ ಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹಣ ಕಳಿಸಲು ಕಾಂಗ್ರೆಸ್ ಸರ್ಕಾರ ಕಂಟ್ರ್ಯಾಕ್ಟರ್ ಬಳಿ ಹಣ ಕೂಡಿಟ್ಟಿತ್ತು ಎಂದು ವಿರೋಧಪಕ್ಷಗಳಳು ಆರೋಪಿಸುತ್ತಿವೆ.