ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಚ್ಚುತ್ತಿದ್ದರು. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿ ಅಂತ ಅಂಗಲಾಚಿ ಬೇಡಿಕೊಂಡರೂ ಪೊಲೀಸರು ಮಾತ್ರ ತಮಗೆ ಸಂಬಂಧವೇ ಇಲ್ಲ ಎಂಬಂತೆ ನಿಂತು ನೋಡುತ್ತಿದ್ದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.