ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉದ್ಧಾರಕರೆಂದು ಪೋಸು ನೀಡುವ ಕಾಂಗ್ರೆಸ್, ಬಿಜೆಪಿಯನ್ನು ಸಂವಿಧಾನ ವಿರೋಧಿ ಎನ್ನುತ್ತದೆ ಮತ್ತು ಕೇಂದ್ರದಲ್ಲಿ ಬಿಜೆಪಿಗೆ 400ಕ್ಕಿಂತ ಹೆಚ್ಚು ಸ್ಥಾನ ಸಿಕ್ಕರೆ ಸಂವಿಧಾನ ಬದಲಾಯಿಸುತ್ತಾರೆ ಅಂತ ಅಪಪ್ರಚಾರ ಮಾಡುತ್ತದೆ. ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ ಅಂಬೇಡ್ಕರ್ ಧ್ವನಿಯಾಗಿದ್ದ ದಲಿತ ಸಮುದಾಯದ ಹಣ ಲೂಟಿ ಮಾಡುವ ಕಾಂಗ್ರೆಸ್ ಗೆ ಸಂವಿಧಾನದ ಬಗ್ಗೆ ಮಾತಾಡುವ ನೈತಿಕತೆಯಿದೆಯೇ ಎಂದು ಯತ್ನಾಳ್ ಪ್ರಶ್ನಿಸಿದರು.