ಮುಂದುವರಿದಿರುವ ಕಾರ್ಯಾಚರಣೆ

ಗುಡ್ಡ ಕುಸಿದಾಗ ಉರುಳಿ ಬಿದ್ದ ಕಲ್ಲು ಮಣ್ಣು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡೆಯಾದ ಕಾರಣ ವಾಹನ ಸಂಚಾರ ಸಂಪೂರ್ಣವಾಗಿ ನಿಂತು ಹೋಗಿದೆ. ಶೇಕಡ 70 ರಷ್ಟು ಮಣ್ಣು ತೆರವು ಕಾರ್ಯಾಚರಣೆ ಮುಗಿದಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ಉಳಿದ ಶೇಕಡ 30ರಷ್ಟು ಮಣ್ಣನ್ನು ತೆರವುಗೊಳಿಸಲು ಕನಿಷ್ಟ ಮೂರು ದಿನಗಳಾದರೂ ಬೇಕಾಗುತ್ತದೆ.