ಅಮಿತ್​ ಶಾ ಹೇಳಿಕೆ ಖಂಡಿಸಿ ಗದಗ-ಬೆಟಗೇರಿ ಬಂದ್​: ಶಾಲಾ-ಕಾಲೇಜುಗಳಿಗೆ ರಜೆ

ಕೇಂದ್ರ ಸಚಿವ ಅಮಿತ್ ಶಾ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಗದಗ-ಬೆಟಗೇರಿ ಬಂದ್‌ಗೆ ಕರೆ ನೀಡಿವೆ. ವಿವಿಧ ಸಂಘಟನೆಗಳು ಅಮಿತ್ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟಿಸಿದವು. ಬಂದ್‌ನಿಂದಾಗಿ ನಗರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.