ಗ್ರಾಮಸ್ಥರಲ್ಲಿ ಕೆಲವರು ಯುವಕರ ಕುಟುಂಬಗಳಿಗೆ ಭೂ ಒಡೆತನ ಯೋಜನೆ ಅಡಿ ಜಮೀನು ಮಂಜೂರು ಮಾಡಿಸುವಂತೆ ಹೇಳಿದ್ದಾರೆ. ಅವರಿಂದ ಅರ್ಜಿ ರೆಡಿ ಮಾಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ಹೇಳಿದ್ದೇನೆಂದ ಸಚಿವ, ಜಿಲ್ಲಾಧಿಕಾರಿಗಳಿಗೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಅಗತ್ಯವಿರುವ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರೈಸಲು ಸೂಚಿಸಿರುವುದಾಗಿ ಹೇಳಿದರು.