ಡಿಕೆ ಶಿವಕುಮಾರ್

ರಾಜ್ಯದ ಜಲಾಶಯಗಳ ಬೀಗದ ಕೈಗಳು ತಮ್ಮ ಕೈಯಲ್ಲಿದೆ, ಅವು ಬೇರೆಯವರ ಕೈ ಸೇರದಂತೆ ರಾಜ್ಯ ಸರ್ಕಾರ ಎಚ್ಚರವಹಿಸಬೇಕಿದೆ ಎಂದು ಶಿವಕುಮಾರ್ ಹೇಳಿದರು. ಕಾವೇರಿ ನೀರಿಗೆ ಸಂಬಂಧಿಸಿದ ಗಂಭೀರ ಮತ್ತು ಸೂಕ್ಷ್ಮ ವಿಷಯದಲ್ಲೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ರಾಜಕಾರಣ ಮಾಡುತ್ತಿದ್ದಾರೆ, ಯಾರು ಏನು ಬೇಕಾದರೂ ಟೀಕೆ ಮಾಡಲಿ, ರಾಜ್ಯ ರೈತರ ಹಿತ ಕಾಯುವುದು ತಮ್ಮ ಆದ್ಯತೆಯಾಗಿದೆ ಎಂದು ಶಿವಕುಮಾರ್ ಹೇಳಿದರು.