ಅಶ್ಲೀಲ ಪದ ಬಳಕೆ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡೀ ಅನಗತ್ಯವಾಗಿ ವಿವಿಧ ಸ್ಥಳಗಳಿಗೆ ಕರೆದೊಯ್ದಿದ್ದಾರೆ. ಪೊಲೀಸರ ನಡೆ ವಿರುದ್ಧ ಆಕ್ರೋಶಗೊಂಡಿರುವ ಸಿಟಿ ರವಿ ಅವರು ರಾಮದುರ್ಗದಲ್ಲಿ ಧರಣಿ ಕೂತರು. ಪೊಲೀಸರ ವಿರುದ್ಧ ಅವರು ಕೊಲೆ ಯತ್ನದ ಆರೋಪ ಹೊರಿಸಿದ್ದಾರೆ.