ಬಿವೈ ವಿಜಯೇಂದ್ರ

ಧರ್ಮ ಮತ್ತು ಸಮಾಜಗಳ ನಡುವೆ ವಿಷಬೀಜ ಬಿತ್ತುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಬಿವೈ ವಿಜಯೇಂದ್ರ ಹೇಳಿದರು. ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ನೀಡಿದ ಬೂಟಾಟಿಕೆಯ ಗ್ಯಾರಂಟಿಗಳಿಂದ ಜನ ರೋಸಿಹೋಗಿದ್ದಾರೆ ಮತ್ತು ಸರ್ಕಾರದೆಡೆ ವಿಶ್ವಾಸ ಕಳೆದುಕೊಂಡಿದ್ದಾರೆ. ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ನೀಡುವ ಗ್ಯಾರಂಟಿಯ ಮೇಲೆ ವಿಶ್ವಾಸವಿದೆಯೇ ಹೊರತು ಕಾಂಗ್ರೆಸ್ ಪಕ್ಷದ ಪೊಳ್ಳು ಆಶ್ವಾಸನೆಗಳ ಮೇಲೆ ಅಲ್ಲ ಎಂದು ವಿಜಯೇಂದ್ರ ಹೇಳಿದರು.