ಬನ್ನೇರುಘಟ್ಟ ರಸ್ತೆ

ಬನ್ನೇರುಘಟ್ಟ ರಸ್ತೆಯಲ್ಲಿ ಜಲಮಂಡಳಿ ಕಾಮಗಾರಿ ನಡೆಸುತ್ತಿರುವುದರಿಂದ ರೋಡು ಜಲಾವೃತ. ಬಿಡಬ್ಲ್ಯೂಎಸ್ ಎಸ್ ಬಿ ಕೆಲಸಕ್ಕಿಳಿದರೆ ಸಾಕು, ಆ ನಿರ್ದಿಷ್ಟ ಪ್ರದೇಶದ ರಸ್ತೆಗಳು ಎಕ್ಕುಟ್ಟಿ ಹೋದಂತೆಯೇ! ಪ್ರಾಮಾಣಿಕವಾಗಿ ತೆರಿಗೆ ಪಾವತಿಸುವ ಜನ ಸಂಕಷ್ಟ ಅನುಭವಿಸಬೇಕು. ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಇಟ್ಟುಕೊಂಡಿರುವ ಡಿಕೆ ಶಿವಕುಮಾರ್ ಜನರ ಸಮಸ್ಯೆಗಳನ್ನು ಬೇಗ ಅರ್ಥ ಮಾಡಿಕೊಳ್ಳಲಿ.