ಸರ್ಕಾರ ಎಸ್ ಐಟಿ ಯನ್ನು ರಚನೆ ಮಾಡಿದೆ, ತನಿಖೆ ನಡೆಯಲಿ ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸಲಿ ಎಂದು ಕುಮಾರಸ್ವಾಮಿ ಹೇಳಿದರು. ಪ್ರಜ್ವಲ್ ಈಗ ಎಲ್ಲಿದ್ದಾರೆ ಅಂತ ಕೇಳಿದ ಪ್ರಶ್ನೆಗೆ ಸಿಡುಕಿದ ಕುಮಾರಸ್ವಾಮಿ, ಅದು ತನಗೆ ಹೇಗೆ ಗೊತ್ತಾಗುತ್ತದೆ ಎಂದರು. ಪ್ರಜ್ವಲ್ ತಪ್ಪಿತಸ್ಥರಾಗಿದ್ದರೆ ಪಕ್ಷ ಸಹ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಿದೆ ಎಂದು ಕುಮಾರಸ್ವಾಮಿ ಹೇಳಿದರು.