ಇಂದು ಸಿಟಿ ರೌಂಡ ಹಾಕಿರುವ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಕಂದಾಯ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಳಿಕ ಎಸ್.ಪಿ.ರೋಡ್ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ್ದು, ರಸ್ತೆಯ ಸ್ಥಿತಿ ನೋಡಿ ಬಿಬಿಎಂಪಿ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದಾರೆ. ಶೀಘ್ರದಲ್ಲಿ ರಸ್ತೆ ದುರಸ್ತಿ ಮಾಡುವಂತೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.