ಹೊಳೆನರಸೀಪುರದಲ್ಲಿ ಸಂಭ್ರಮವೋ ಸಂಭ್ರಮ

ಕಿಡ್ನಾಪ್​ ಪ್ರಕರಣದಲ್ಲಿ ಜೈಲು ಸೇರಿದ ಹೆಚ್​.ಡಿ.ರೇವಣ್ಣಗೆ ಕೊನೆಗೂ ರಿಲೀಫ್ ಸಿಕ್ಕಿದೆ. ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ರೇವಣ್ಣಗೆ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕರೂ ಇವತ್ತು ರೇವಣ್ಣ ಇಂದು ಬಿಡುಗಡೆ ಆಗಲ್ಲ. ಬದಲಿಗೆ ನಾಳೆ ರಿಲೀಸ್ ಆಗಲ್ಲಿದ್ದಾರೆ. ಅತ್ತ ಹೆಚ್​.ಡಿ.ರೇವಣ್ಣಗೆ ಜಾಮೀನು ಸಿಗುತ್ತಿದ್ದಂತೆ ಇತ್ತ ಹೊಳೆನರಸೀಪುರದ ಮಹಾತ್ಮ ಗಾಂಧಿ ಸರ್ಕಲ್​ನಲ್ಲಿ ಅಭಿಮಾನಿಗಳು ರೇವಣ್ಣ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.