ರೇಣುಕಾ ಸ್ವಾಮಿ ಕೊಲೆಯಾದ ಶೆಡ್​ಗೆ ಬಂದಿತ್ತು ದರ್ಶನ್​ ಕಾರು; ಸಿಸಿಟಿವಿ ದೃಶ್ಯ ಲಭ್ಯ

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್​ ಈಗ ದೊಡ್ಡ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಅರೆಸ್ಟ್​ ಆಗಿದ್ದು ಪೊಲೀಸರು ವಿವಿಧ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದಾರೆ. ರೇಣುಕಾ ಸ್ವಾಮಿಯನ್ನು ಶೆಡ್​ಗೆ ಕರೆದುಕೊಂಡು ಹೋಗಿ ಹಲ್ಲೆ ಮಾಡಲಾಗಿತ್ತು. ಅದೇ ಶೆಡ್​ಗೆ ಅಂದು ರಾತ್ರಿ ದರ್ಶನ್​ ಅವರ ಕಾರು ಕೂಡ ಬಂದಿತ್ತು. ಅದಕ್ಕೆ ಸಾಕ್ಷಿ ಎಂಬಂತೆ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಈ ಪ್ರಕರಣದಲ್ಲಿ ದರ್ಶನ್​ ಜೊತೆ ಪವಿತ್ರಾ ಗೌಡ ಸೇರಿದ ಒಟ್ಟು 13 ಜನರ ಬಂಧನ ಆಗಿದೆ. ಎಲ್ಲರನ್ನೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕೋರ್ಟ್​ಗೆ ಹಾಜರುಪಡಿಸಲಾಗುವುದು.