ಯೋಗೇಶ್ವರ್ ಅವರೇ ಚನ್ನಪಟ್ಟಣದಿಂದ ಸ್ಪರ್ಧಿಸಲಿ ಅನ್ನೋದು ವಿಜಯೇಂದ್ರರ ಇಂಗಿತವಾಗಿರುವುದು ಅವರ ಮಾತಿನಿಂದ ಸ್ಪಷ್ಟವಾಗುತ್ತದೆ. ಯೋಗೇಶ್ವರ್ ಕ್ಷೇತ್ರದ ಮೇಲೆ ಉತ್ತಮ ಹಿಡಿತ ಹೊಂದಿದ್ದಾರೆ, ಅವರಿಗೆ ಸಾಕಷ್ಟು ಸಂಖ್ಯೆಯಲ್ಲಿ ಬೆಂಬಲಿಗರಿದ್ದಾರೆ ಎಂದು ವಿಜಯೇಂದ್ರ ಹೇಳುವ ಮಾತಿನ ಹಿಂದಿರುವ ಮರ್ಮ ಅರ್ಥಮಾಡಿಕೊಳ್ಳಬಹುದು.