ಸತ್ತವರಲ್ಲಿ 59ಜನ ವಿದೇಶಿಯರಿರುವ ಕಾರಣ ಅವರ ಕುಟುಂಬಸ್ಥರು ಅಹಮದಾಬಾದ್ ಬರುವುದು ತಡವಾಗುತ್ತಿದೆ. ಏತನ್ಮಧ್ಯೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಮಾನ ದುರಂತ ನಡೆದ ಸ್ಥಳ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳೊಂದಿಗೆ ಮತ್ತು ಮೃತರ ಸಂಬಂಧಿಕರೊಂದಿಗೆ ಮಾತಾಡಿ ಸಾಂತ್ವನ ಹೇಳಿದ್ದಾರೆ ಮತ್ತು ವಿಮಾನ ಪತನಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರೊಂದಿಗೆ ಸಭೆಯನ್ನು ಸಹ ನಡೆಸಿದ್ದಾರೆ.