ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಗಳು ಹೊಸ ರಸ್ತೆಗಳನ್ನು ನಿರ್ಮಿಸುವ ಮಾತು ಹಾಗಿರಲಿ, ತಾವು ಹಾಕಿಸಿದ ರಸ್ತೆಗಳ ಗುಂಡಿ ಮುಚ್ಚಿಸುವುದು ಕೂಡ ಸಾಧ್ಯವಾಗಿಲ್ಲ ಎಂದು ಹೇಳಿದರು. ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ಸರಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿರುವುದಾಗಿ ಕುಮಾರಸ್ವಾಮಿ ಹೇಳಿದರು. ಪರೋಕ್ಷವಾಗಿ ಅವರು ಸಂಸದ ಡಿಕೆ ಸುರೇಶ್ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದು ಸ್ಪಷ್ಟವಾಗಿತ್ತು.