ನೂರಾರು ಕೋಟಿ ರೂಪಾಯಿ ಅನುದಾನ ನೀಡಿದ್ದರೂ ಸಿಎಂ ಸಿದ್ದರಾಮಯ್ಯ ತವರು ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಇಲ್ಲದಿರುವುದು ಬೆಳಕಿಗೆ ಬಂದಿದೆ. ಇರುವ ಒಂದು ವ್ಹೀಲ್ ಚೇರ್ಗೆ ಆಸ್ಪತ್ರೆ ಸಿಬ್ಬಂದಿ ಬೀಗ ಹಾಕಿಟ್ಟಿದ್ದರಿಂದ ವೃದ್ಧೆಯೊಬ್ಬರನ್ನು ಸಂಬಂಧಿಕರು ಪ್ಲಾಸ್ಟಿಕ್ ಚೇರ್ನಲ್ಲೇ ಕರೆದೊಯ್ದ ವಿಡಿಯೋ ಈಗ ವೈರಲ್ ಆಗುತ್ತಿದೆ.