ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ. ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈಹಾಕಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಡಿಕೆ ಶಿವಕುಮಾರ್ ಮುಖಂಡನ ಕಪಾಳಕ್ಕೆ ಹೊಡೆದಿದ್ದಾರೆ.