ಬಿಎಸ್ ಯಡಿಯೂರಪ್ಪ

ಜಾರಿ ನಿರ್ದೇಶನಾಯ ಕೇಂದ್ರ ತನಿಖಾ ದಳಕ್ಕೆ ಶಿವಕುಮಾರ್ ಡಿಎ ಪ್ರಕರಣದಲ್ಲಿ ತನಿಖೆ ನಡೆಸಬೇಕೆಂದು ಹೇಳಿದ ಬಳಿಕ ಆಗಿನ ತಮ್ಮ ಸರ್ಕಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿತ್ತು ಎಂದು ಯಡಿಯೂರಪ್ಪ ಹೇಳಿದರು. ಆದರೆ, ಶಿವಕುಮಾರ್ ರನ್ನು ರಕ್ಷಿಸಲು ಸಿದ್ದರಾಮಯ್ಯ ಸಿಬಿಐ ತನಿಖೆ ಆದೇಶವನ್ನು ವಾಪಸ್ಸು ಪಡೆದಿದ್ದು ಕಾನೂನುಬಾಹಿರ. ಬಿಜೆಪಿ, ಸರ್ಕಾರದ ಕ್ರಮವನ್ನು ಉಚ್ಚ ಮತ್ತು ಸರ್ವೋಚ್ಚ ನ್ಯಾಯಾಲಯಗಳಲ್ಲಿ ಪ್ರಶ್ನಿಸಲಿದೆ ಎಂದು ಯಡಿಯೂರಪ್ಪ ಹೇಳಿದರು.